ಪ್ರತಿನಿಧಿ ಶುಲ್ಕದ ಹಿಂದೆ ದುಡ್ಡು ಮಾಡುವ ಉದ್ದೇಶವಿಲ್ಲ: ಆಳ್ವ

ವಿದ್ಯಾಗಿರಿ: ಆಳ್ವಾಸ್ ನುಡಿಸಿರಿಯ ಎರಡನೇ ದಿನವಾದ ಇಂದು ಮುಂಜಾನೆ ಆಳ್ವಾಸ್ ನುಡಿಸಿರಿಯ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅವರು ನುಡಿಸಿರಿಯ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು.
ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ನುಡಿಸಿರಿ ಪ್ರತಿನಿಧಿ ಶುಲ್ಕವನ್ನು ಶುಲ್ಕವನ್ನು ಯಾವುದೇ ಕಾರಣಕ್ಕೂ ಹೆಚ್ಚಿಸುವುದಿಲ್ಲ, ಇದರ ಹಿಂದೆ ಯಾವುದೇ ದುಡ್ಡು ಮಾಡುವ ಉದ್ದೇಶವಿಲ್ಲ. ಆಳ್ವಾಸ್ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಯಾವತ್ತೂ ಹೊರೆಯಾಗುವುದಿಲ್ಲ. ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳೊಂದಿಗೆ ಪಠ್ಯ ವಿಷಯಗಳಲ್ಲಿಯೂ ನಿರಂತರವಾಗಿ ಸಾಧನೆ ಮಾಡುತ್ತಿದ್ದಾರೆ ಎಂದರು.
ಸಂವಹನದಲ್ಲಿ ಡಾ. ನಾ. ದಾಮೋದರ ಶೆಟ್ಟಿ ಉಪಸ್ಥಿತರಿದ್ದರು.