ಆಳ್ವಾಸ್ ಚಿತ್ರಸಿರಿಗೆ ಚಾಲನೆ

ಆಳ್ವಾಸ್ ನುಡಿಸಿರಿಗೆ ಪೂರ್ವಭಾವಿಯಾಗಿ ಆಳ್ವಾಸ್ ಚಿತ್ರಸಿರಿ ರಾಜ್ಯಮಟ್ಟದ ಚಿತ್ರಕಲಾ ಶಿಬಿರವನ್ನು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಮೂಡಬಿದಿರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಉದ್ಘಾಟಿಸಿದರು. ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು. ರಾಜೇಂದ್ರ ಕೇದಿಗೆ, ಕ್ಯಾ.ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.